CrimeDistricts

ದೀಪಾವಳಿ ಪೂಜೆ ವೇಳೆಯೇ ದುರಂತ; 7 ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿ!

ಉಡುಪಿ; ದೀಪಾವಳಿ ದಿನವೇ ಹಲವೆಡೆ ಬೆಂಕಿ ಅನಾಹುತಗಳು ಸಂಭವಿಸಿದೆ. ಬೆಂಗಳೂರು ಹಾಗೂ ಹೈದರಾಬಾದ್‌ನಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೆ, ಉಡುಪಿಯಲ್ಲಿ ಮೀನಾಗರಿಕಾ ಬೋಟುಗಳು ಬೆಂಕಿಗಾಹುತಿಯಾಗಿವೆ.

ಉಡುಪಿಯ ಗಂಗೊಳ್ಳಿ ಮೀಗಾರಿಕಾ ಬಂದರು ಪ್ರದೇಶದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಬೋಟುಗಳನ್ನು ಲಂಗರು ಹಾಕಲಾಗಿತ್ತು. ಹಬ್ಬದ ಹಿನ್ನೆಲೆಯಲ್ಲಿ ಪೂಜೆ ನೆರವೇರಿಸಲಾಗುತ್ತಿತ್ತು. ಈ ವೇಳೆ ಬೋಟುಗಲಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಘಟನೆಯಲ್ಲಿ ಅಕ್ಕ ಪಕ್ಕ ನಿಲ್ಲಿಸಿದ್ದ ಏಳು ಬೋಟುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.

ಪೂಜೆ ಸಮಯದಲ್ಲಿ ಪಟಾಕಿ ಸಿಡಿಸಿದ ಕಾರಣ ಅದರ ಕಿಡಿ ತಗುಲಿ ಬೋಟ್​​ನಲ್ಲಿ ಬೆಂಕಿ ಹಬ್ಬಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಗ್ನಿಶಾಮಕ ದಳದವರು ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ಮಾಡುತ್ತಿದ್ದಾರೆ.

ಘಟನೆಯಿಂದಾ  ಕೋಟ್ಯಂತರ ರೂಪಾಯಿ ನಷ್ಟವಾಗಿದ್ದು, ಬೋಟುಗಳ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Share Post