Districts

ಕಾರು-ಲಾರಿ ನಡುವೆ ಡಿಕ್ಕಿ; ಬೆಂಗಳೂರಿನ ಇಬ್ಬರು ದರ್ಮರಣ

ಚಿತ್ರದುರ್ಗ: ಇಲ್ಲಿನ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ದುರ್ಘಟನೆಯಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಬೆಂಗಳೂರಿನ ವೈಟ್‌ಫೀಲ್ಡ್ ನಿವಾಸಿ ಶಿವರಾಮ್ (45) ಹಾಗೂ ಚೇತನ್ ಕುಮಾರ್ (30) ಅಪಘಾತದಲ್ಲಿ ಮತಪಟ್ಟವರೆಂದು ಗುರುತಿಸಲಾಗಿದೆ. ಇನ್ನು ಸ್ವಾಮಿ (55) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಗೋವಾದಿಂದ ಬೆಂಗಳೂರಿಗೆ ಮರಳುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಲಾರಿ ಪಂಚರ್ ಆಗಿ ನಿಂತಿದೆ. ಇದನ್ನು ನೋಡದ ಕಾರಿನ ಚಾಲಕ ವೇಗವಾಗಿ ಬಂದಿದ್ದರಿಂದ ಹಿಂದಿನಿಂದ ಡಿಕ್ಕಿ ಹೊಡೆದಿದೆ.

Share Post