CrimeDistricts

ಖಾರದಪುಡಿ ಎರಚಿ ಚಿನ್ನದ ಸರ ದರೋಡೆ; ಅಡಿಕೆ ತೋಟದಲ್ಲಿ ಸಿಕ್ಕಿಬಿದ್ದ ಕಳ್ಳರು

ತುಮಕೂರು; ನಗರ, ಪಟ್ಟಣಗಳಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿತ್ತು. ಇದೀಗ ಹಳ್ಳಿಗೂ ಇದು ಹಬ್ಬಿದೆ. ತುಮಕೂರು ಜಿಲ್ಲೆಯಲ್ಲಿ  ಮಹಿಳೆಯೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ತುರುವೇಕೆರೆ ತಾಲ್ಲೂಕಿನ ಹಾಲುಗೊಂಡನಹಳ್ಳಿಯಲ್ಲಿ ಘಟನೆ ನಡೆದಿದೆ.

  ಸುಜಾತ ಎಂಬುವವರು ತನ್ನ ತೋಟಕ್ಕೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ನಂತರ ಕತ್ತಿನಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡಿದ್ದಾರೆ. ತಪ್ಪಿಸಿಕೊಳ್ಳಲು ದಾರಿ ಕಾಣದ ಕಾರಣಕ್ಕೆ ಬೈಕ್‌ನ್ನು ಅಡಿಕೆ ತೋಟಕ್ಕೆ ನುಗ್ಗಿಸಿದ್ದಾರೆ. ಮಣ್ಣು ತೇವ ಇದ್ದಿದ್ದರಿಂದ ಬೈಕ್‌ ಮಣ್ಣಿನಲ್ಲಿ ಸಿಲುಕಿಬಿಟ್ಟಿದೆ. ಅಷ್ಟರಲ್ಲಿ ಸಾರ್ವಜನಿಕರು ಮಹಿಳೆಯರ ಕಿರುಚಾಟ ಕೇಳಿ ಅಲ್ಲಿಗೆ ಬಂದಿದ್ದು, ಆರೋಪಿಗಳನ್ನು ಹಿಡಿದಿದ್ದಾರೆ. ದಂಡಿನಶಿವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಂಧಿತರನ್ನು ಚನ್ನರಾಯ ಪಟ್ಟಣ ತಾಲೂಕಿನ ದಿಡಗ ಗ್ರಾಮದ ಯೋಗೀಶ್ ಮತ್ತು ರಾಕೇಶ್ ಎಂದು ಗುರುತಿಸಲಾಗಿದೆ.

Share Post