CrimeDistricts

ಗಂಗೆ ಮುಟ್ಟಿ ಆಣೆ-ಪ್ರಮಾಣ; ನೀರುಪಾಲಾದ ಇಬ್ಬರು ಸ್ನೇಹಿತರು

ಹಾಸನ; ಗಂಗೆ ಮುಟ್ಟಿ ಆಣೆ ಪ್ರಮಾಣ ಮಾಡಲು ಹೋಗಿದ್ದ ಇಬ್ಬರು ಸ್ನೇಹಿತರು ನೀರುಪಾಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ ತೇಜೂರು ಗ್ರಾಮದ ಆನಂದ್‌ ಮತ್ತು ಚಂದ್ರು ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಹಣಕಾಸಿನ ವಿವಾರದಲ್ಲಿ ಜಗಳ ನಡೆದಿದ್ದು, ಆಣೆ – ಪ್ರಮಾಣಕ್ಕೆ ಮುಂದಾಗಿದ್ದಾರೆ. ಈ ವೇಳೆ ಈ ದುರಂತ ನಡೆದಿದೆ. ಆನಂದ್ ಮತ್ತು ಚಂದ್ರು ಹಾಸನದ ಬೇಕರಿಯೊಂದರಲ್ಲಿ ಕೆಲಸ ಮಾಡ್ತಾ ಇದ್ದರು. ಸಮಾರಂಭಗಳಲ್ಲಿ ಸಿಹಿ ತಯಾರಿಸುವ ಕಂಟ್ರ್ಯಾಕ್ಟ್ ಕೂಡಾ ಮಾಡ್ತಿದ್ದರು. ಗುರುವಾರ ರಿಂಗ್ ರಸ್ತೆಯ ಬಾರ್ ಒಂದರಲ್ಲಿ ಮದ್ಯಪಾನ ಮಾಡಿದ್ದಾರೆ. ಇದೇ ವೇಳೆ ಹಣಕಾಸಿನ ವಿಚಾರದಲ್ಲಿ ಜಗಳ ನಡೆದಿದ್ದು, ಗಂಗೆ ಮುಟ್ಟಿ ಆಣೆ ಮಾಡಲು ಹೋಗಿ ಇಬ್ಬರೂ ನೀರುಪಾಲಾಗಿದ್ದಾರೆ.

Share Post