CrimeDistricts

ಬೆಳಗಾವಿ ಬಳಿ ನಡೀತು ಭೀಕರ ಅಪಘಾತ; ಇಬ್ಬರು ಪಾದಚಾರಿಗಳ ದುರ್ಮರಣ

ಬೆಳಗಾವಿ; ಬೆಳಗಾವಿ ಬಳಿ ಕಳೆದ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪಾದಚಾರಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ರಾಜ್ಯ ಮಟ್ಟದ ಉತ್ಸವ ನೋಡಿ ಹಿಂತಿರುಗುವಾಗ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ನ್ನು ದಾಟುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ನಡೆದಿದೆ.

ಬೆಳಗಾವಿ ಜಿಲ್ಲೆ ಕಿತ್ತೂರು ಹೊರವಲಯದಲ್ಲಿರುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಖಾನಾಪುರ ತಾಲ್ಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ(33), ಕರೆಪ್ಪ ತಳವಾರ(36) ಮೃತರು ಎಂದು ಗುರುತಿಸಲಾಗಿದೆ. ಅಪಘಾತ ಮಾಡಿದ ಕಾರು ಬೆಳಗಾವಿಯಿಂದ ಧಾರವಾಡಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ.

Share Post