CrimeDistricts

ಸಾರ್ವಜನಿಕರಿಗೆ ಅಡ್ಡಿ ಮಾಡಬೇಡಿ ಎಂದಿದ್ದಕ್ಕೆ ಪೇದೆಗಳ ಮೇಲೆ ಹಲ್ಲೆ..!

ಹಾವೇರಿ; ಹೈವೇ ಪಕ್ಕದಲ್ಲಿ ಅಂಗಡಿ ಇಟ್ಟಿದ್ದಲ್ಲದೆ ಜನರ ಓಡಾಟಕ್ಕೆ ತೊಂದರೆಯಾಗುವಂತೆ ಹಗ್ಗ ಕಟ್ಟಿದ್ದನ್ನು ತೆಗೆಯುವಂತೆ ಹೇಳಿದ್ದಕ್ಕೆ ಇಬ್ಬರು ಕಾನ್‍ಸ್ಟೇಬಲ್‍ಗಳ ಮೇಲೆ ಹಲ್ಲೆ ಮಾಡಿರುವ ಘಟನೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಗೇಟ್ ಬಳಿ ನಡೆದಿದೆ.

ಬಂಕಾಪುರ ಪೊಲೀಸ್ ಠಾಣೆಯ ಪೇದೆಗಳಾದ ಗಂಗಾಧರ್ ಹರಿಜನ ಮತ್ತು ದುಂಡಪ್ಪ ಮೇಲೆ ಹಲ್ಲೆ ನಡೆಸಲಾಗಿದೆ. ಇಬ್ಬರನ್ನೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಹಲ್ಲೆ ಮಾಡಿದ ಆರೋಪಿಗಳನ್ನು ಹಾನಗಲ್ ತಾಲೂಕಿನ ಹರವಿ ಗ್ರಾಮದ ಅರ್ಜುನ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ.

ಟೋಲ್ ಗೇಟ್ ಬಳಿ ಇರುವ ಚಹಾ ಅಂಗಡಿಯಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಅಂಗಡಿ ಮುಂದಿನ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಟ್ಟಿಗೆ ಇಟ್ಟು ಹಗ್ಗ ಕಟ್ಟಿ ತಿಂಡಿ-ತಿನ್ನಿಸುಗಳ ಪ್ಯಾಕೇಟ್ ಹಾಕಿ ವಾಹನಗಳ ಓಡಾಟಕ್ಕೆ ತೊಂದರೆ ಮಾಡುತ್ತಿದ್ದರೆಂದು ತಿಳಿದುಬಂದಿದೆ.

 

Share Post