Districts

ಪಕ್ಕದ ಮನೆಯಲ್ಲಿ ಆಶ್ರು ಪಡೆದರೂ ಬಿಡಲಿಲ್ಲ ಜವರಾಯ; ಮರಬಿದ್ದು ಇಬ್ಬರು ಮಹಿಳೆಯರ ಸಾವು

ಚಿಕ್ಕಮಗಳೂರು; ಭಾರಿ ಮಳೆಯಿಂದಾಗಿ ಇಲ್ಲಿನ ಮೂಡಿಗೆರೆ ತಾಲೂಕಿನ ಕೆ.ತಲಗೂರು ಗ್ರಾಮದಲ್ಲಿ ಇಬ್ಬರು ಮಹಿಳೆಯರು ಜೀವ ತೆತ್ತಿದ್ದಾರೆ.  ಮನೆ ಮೇಲೆ ಬೃಹದಾಕಾರದ ಮರ ಬಿದ್ದು ಈ ದುರ್ಘಟನೆ ನಡೆದಿದ್ದು, ಮೃತರನ್ನು ಚಂದ್ರಮ್ಮ ಹಾಗೂ ಸರಿತಾ ಎಂದು ಗುರುತಿಸಲಾಗಿದೆ.

ಮನೆ ಶಿಥಿಲಗೊಂಡಿರುವ ಕಾರಣದಿಂದ ಸರಿತಾ ಎಂಬುವವರು ತನ್ನ ಇಬ್ಬರು ಮಕ್ಕಳೊಂದಿಗೆ ಚಂದ್ರಮ್ಮ ಎಂಬವರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಆದರೆ ನಿನ್ನೆ ಸುರಿದ ಭಾರೀ ಮಳೆಗೆ ಚಂದ್ರಮ್ಮ ಅವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದ್ದು,ಇದರಿಂದ ತೀವ್ರವಾಗಿ ಗಾಯಗೊಂಡ ಸರಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಂದ್ರಮ್ಮ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಕ್ಕಳಾದ ಸುನಿಲ್ ಮತ್ತು ದೀಕ್ಷಿತ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Share Post