BengaluruCrimeDistricts

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ; ಸಿಎಂ ಕುಟುಂಬ ಅವಹೇಳನ ಮಾಡಿದ್ದ ಮಹಿಳೆ ಅರೆಸ್ಟ್‌

ಬೆಂಗಳೂರು; ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣ ಮಾಡಿದ ಪ್ರಕರಣದ ಸಂಬಂಧ ತುಮಕೂರಿನ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯ ಅವರ ಕುಟುಂಬದ ಅವಹೇಳಕಾರಿ ಪೋಸ್ಟ್‌ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಆ ಮಹಿಳೆಯನ್ನು ಬಂಧಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧಿತ ಆರೋಪಿ.

ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಅವರ ಕುಟುಂಬದ ಸದಸ್ಯರನ್ನು ಎಳೆ ತರಲಾಗಿತ್ತು. ಟ್ವೀಟ್‌ ಮಾಡಿದ್ದ ಶಕುಂತಲಾ ಅವರು, ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಸೊಸೆಯರ ವಿಡಿಯೋಗಳನ್ನೂ ಹಾಎಗ ತೆಗೆಯಬಹುದೇ ಎಂಬ ರೀತಿಯಲ್ಲಿ ಟ್ವೀಟ್‌ ಮಾಡಿದ್ದರು. ಈ ಸಂಬಂಧ ಹೈಗ್ರೌಂಡ್ಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರು ಶಕುಂತಲಾ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Share Post