CrimeDistricts

ಪತ್ನಿ ಖಾತೆಗೆ 2.69 ಕೋಟಿ ವರ್ಗಾವಣೆ; ಬ್ಯಾಂಕ್‌ ಉದ್ಯೋಗಿ ನಾಪತ್ತೆ..!

ಕಾರವಾರ; ಪತ್ನಿ ಖಾತೆಗೆ 2.69 ಕೋಟಿ ರೂಪಾಯಿ ವರ್ಗಾವಣೆ ಮಾಡಿ, ಬ್ಯಾಂಕ್‌ ಅಧಿಕಾರಿಯೊಬ್ಬ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. 

ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕ ಕುಮಾರ ಕೃಷ್ಣಮೂರ್ತಿ ಬೋನಾಲ ನಾಪತ್ತೆಯಾಗಿರುವಾತ. ಈತ ಆಂಧ್ರಪ್ರದೇಶ ಮೂಲದವನು ಎಂದು ತಿಳಿದುಬಂದಿದೆ.  ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತನ್ನ ಹೆಂಡತಿಯ ಖಾತೆಗೆ ವರ್ಗಾವಣೆ ಮಾಡಿ ಇದೀಗ ನಾಪತ್ತೆಯಾಗಿದ್ದಾನೆ.

ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಐಡಿಯನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಲಾದ ಎಸ್‍ಬಿಐ) ಬ್ಯಾಂಕ್‍ನ ಪತ್ನಿ ರೇವತಿ ಪ್ರಿಯಾಂಕ ಗೊರ್ರೆಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿದ್ದಾನೆ.  ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share Post