DistrictsPolitics

ವಿ.ಸೋಮಣ್ಣ ಅಂದರೆ ವಿಕ್ಟರಿ ಸೋಮಣ್ಣ; ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು; ಸಿಎಂ ಬಸವರಾಜ ಬೊಮ್ಮಾಯಿ ಇಂದು ಹಳೇ ಮೈಸೂರು ಭಾಗದಲ್ಲಿ ಪ್ರಚಾರ ನಡೆಸಿದ್ದಾರೆ. ಇಂದು ಅವರು ಟಿ.ನರಸೀಪುರ ಹಾಘೂ ವರುಣಾ ಕ್ಷೇತ್ರದಲ್ಲಿ ಮತಯಾಚನೆ ಮಾಡಿದರು. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.

ವಿ.ಸೋಮಣ್ಣ ಅಂದರೆ ವಿಕ್ಟರಿ ಸೋಮಣ್ಣ ಎಂದು ಅರ್ಥ ಎಂದ ಸಿಎಂ ಬೊಮ್ಮಾಯಿ, ಸೋಮಣ್ಣ ಅವರು ಜನ ಸೇವೆಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ ಎಂದು ಹೇಳಿದರು. ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಸೋಮಣ್ಣ ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ. ಅದೇ ಅಭಿವೃದ್ಧಿ ವರುಣಾದಲ್ಲೂ ಆಗಬೇಕು ಅಂದ್ರೆ ಸೋಮಣ್ಣಗೆ ಮತಹಾಕಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು. ಇನ್ನು ಟಿ.ನರಸಿಪುರದ ಬಿಜೆಪಿ ಅಭ್ಯರ್ಥಿ ಡಾ.ರೇವಣ್ಣ ಅವರಿಗೂ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿಕೊಂಡರು.

Share Post