CrimeDistricts

ವಿಹೆಚ್‌ಪಿ ಸ್ಥಳೀಯ ಅಧ್ಯಕ್ಷನ ಮೇಲೆ ಗುಂಡಿನ ದಾಳಿ; ಸ್ಪಲ್ಪದಲ್ಲೇ ಬಚಾವ್‌

ಮಡಿಕೇರಿ; ಚುನಾವಣೆ ಸಮಯದಲ್ಲಿ ಕೊಡಗಿನಲ್ಲಿ ಗುಂಡಿನ ದಾಳಿ ನಡೆದಿದೆ. ಹಿಂದೂ ಪರ ಸಂಘಟನೆ ವಿಶ್ವ ಹಿಂದೂ ಪರಿಷತ್‌ನ ಸ್ಥಳೀಯ ಅಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆದ್ರೆ ಅದೃಷ್ಟವಶಾತ್‌ ಕೃಷ್ಣಮೂರ್ತಿಯವರು ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ವಿಹೆಚ್‌ಪಿ ಅಧ್ಯಕ್ಷ ಕೃಷ್ಣಮೂರ್ತಿಯವರು ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಆಗಮಿಸುತ್ತಿದ್ದರು. ಈ ವೇಳೆ ಅಡ್ಡ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಆದ್ರೆ ಆ ಗುಂಡು ಕಾರಿಗೆ ಬಿದ್ದಿದೆ. ಇದರಿಂದಾಗಿ ಕೃಷ್ಣಮೂರ್ತಿಯವರು ಪಾರಾಗಿದ್ದಾರೆ. ಅನಂತರ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ಕೃಷ್ಣಮೂರ್ತಿಯವರು ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Share Post