DistrictsPolitics

ಎಐಸಿಸಿ ಅಧ್ಯಕ್ಷರ ತವರಿನಲ್ಲೇ ಬಿಜೆಪಿ ಗೆದ್ದಿದೆ; ಮೋದಿ

ದಾವಣಗೆರೆ; ದಾವಣಗೆರೆಯಲ್ಲಿ ಇಂದು ಎಲ್ಲವೂ ಕೇಸರಿಮಯವಾಗಿತ್ತು. ಎಲ್ಲೆಲ್ಲೂ ಮೋದಿ ಪರವಾದ ಘೋಷಣೆಗಳು ಮೊಳಗಿದವರು. ಸುಮಾರು ಐದು ಜಿಲ್ಲೆಗಳಿಂದ ೫ ಸಾವಿರಕ್ಕೂ ಹೆಚ್ಚು ಬಸ್‌ಗಳಲ್ಲಿ ಜನ ಆಗಮಿಸಿದ್ದರು. ಇದಕ್ಕೆ ಕಾರಣ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ. ದಾವಣಗರೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದರು. ಪ್ರಧಾನಿ ಮೋದಿಯವರನ್ನು ನೋಡಲು ಜನರು ಮುಗಿಬಿದ್ದಿದ್ದರು.

ಬೆಂಗಳೂರಿನಿಂದ ವಿಶೇಷ ಹೆಲಿಕಾಪ್ಟರ್‌ನಲ್ಲಿ ಆಗಮಿಸಿದ ಮೋದಿ ವಿಜಯ ಸಂಕಲ್ಪ ಮಹಾಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ಎಐಸಿಸಿ ಅಧ್ಯಕ್ಷರ ತವರಿನಲ್ಲೇ ಕಾಂಗ್ರೆಸ್‌ ಸೋಲನುಭವಿಸಿದೆ. ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಜಯಶಾಲಿಯಾಗಿದೆ ಎಂದು ಹೇಳಿದರು.

ರೈತರು, ಮಹಿಳೆಯರು, ಬಡವರ ಪರ ಬಿಜೆಪಿ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು.

Share Post