DistrictsPolitics

ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ ಯಾತ್ರೆ; ಗುರುದ್ವಾರಕ್ಕೆ ಅಮಿತ್‌ ಶಾ ಭೇಟಿ

ಬೀದರ್; ಇಂದು ಬಸವಕಲ್ಯಾಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಎರಡನೇ ಯಾತ್ರೆಗೆ ಚಾಲನೆ ಸಿಗಲಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಅಮಿತ್‌ ಶಾ ಬೀದರ್‌ಗೆ ಆಗಮಿಸಿದ್ದು, ಇಲ್ಲಿನ ಗುರುದ್ವಾರಕ್ಕೆ ಭೇಟಿ ಕೊಟ್ಟಿದ್ದರು. ಯಡಿಯೂರಪ್ಪ ಹಾಗೂ ಸಿಎಂ ಬೊಮ್ಮಾಯಿ ಜೊತೆ ಗುರು ಗ್ರಂಥ ಸಾಹೀಬ ದರ್ಶನ ಪಡೆದರು.

ಸುರಕ್ಷತೆ ಹಿನ್ನೆಲೆಯಲ್ಲಿ ಅಮಿತ್‌ ಶಾ ಅವರು ಇಲ್ಲಿಗೆ ಬರೋ ವಿಚಾರವನ್ನು ಗೌಪ್ಯವಾಗಿ ಇಡಲಾಗಿತ್ತು. ಜೊತೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಬ್ಯಾಟರಿ ಚಾಲಿತ ವಾಹನದಲ್ಲಿ ಅಮಿತ್‌ ಶಾ ಹಾಗೂ ಯಡಿಯೂರಪ್ಪ ಗುರುದ್ವಾರಕ್ಕೆ ಹೋದರು. ಸಿಎಂ ಬೊಮ್ಮಾಯಿ ಮತ್ತೊಂದು ವಾಹನದಲ್ಲಿ ತೆರಳಿದರು. ಗುರುದ್ವಾರ ಪ್ರಬಂಧಕ ಕಮಿಟಿ ಅಧ್ಯಕ್ಷ ಬಲಬೀರ್‌ ಸಿಂಗ್‌, ಮನಪ್ರೀತ್‌ ಸಿಂಗ್‌ ಖನೋಜಾ ಅವರು ಅಮಿತ್‌ ಶಾಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ವೇಳೆ ಹಲವು ಬಿಜೆಪಿ ನಾಯಕರು ಹಾಜರಿದ್ದರು.

Share Post