Districts

ಸೊರಬದಲ್ಲಿ ಜೋರಾಯ್ತಯ ರಾಜಕೀಯ; ಶರವಾತಿ ಹೆಸರಲ್ಲಿ ಪಾದಯಾತ್ರೆ

ಶಿವಮೊಗ್ಗ; ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗೆ ಪರಿಹಾರಕ್ಕೆ ಆಗ್ರಹಿಸಿ ಮಧು ಬಂಗಾರಪ್ಪ ನೇತೃತ್ವದಲ್ಲಿ ಇಂದಿನಿಂದ ಪಾದಯಾತ್ರೆ ಶುರುವಾಗಿದೆ. ಆಯನೂರಿನಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಯುತ್ತಿದ್ದು, ಪಾದಯಾತ್ರೆಗೆ ಭರ್ಜರಿ ಸ್ಪಂದನೆ ದೊರೆತಿದೆ. ಸಾವಿರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಮಧುಬಂಗಾರಪ್ಪ ಜೊತೆ ಹೆಜ್ಜೆ ಹಾಕುತ್ತಿದ್ದಾರೆ. ಈ ಮೂಲಕ ಸೊರಬ ರಾಜಕಾರಣಕ್ಕೆ ರಂಗುಬಂದಿದೆ.

ಶರಾವತಿ ಯೋಜನೆಯ ಮುಳುಗಡೆ ಸಂತ್ರಸ್ತರ ಕುಟುಂಬದವರು, ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಮಹಿಳೆಯರು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ಧ್ವಜ ರಾರಾಜಿಸುತ್ತಿದೆ. ಪಕ್ಷದ ಗುರುತು ಇರುವ ಟೋಪಿ, ಟೀಶರ್ಟ್ ಧರಿಸಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

Share Post