DistrictsPolitics

ದಲಿತ ಸಿಎಂ ಮಾಡಲು ನಾವು ಸಿದ್ಧ; ಮಾಜಿ ಸಿಎಂ ಹೆಚ್ಡಿಕೆ

ತುಮಕೂರು; ದಲಿತ ಸಿಎಂ ಮಾಡಲು ನಾವು ಸಿದ್ಧ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ 123 ಸ್ಥಾನ ಬಂದರೆ ದಲಿತ ನಾಯಕನನ್ನು ಸಿಎಂ ಮಾಡುತ್ತೇವೆ ಎಂದು ಹೇಳಿದರು.

ದಲಿತರ ಬಗ್ಗೆ ಅಭಿಮಾನ ಇಟ್ಕೊಂಡಿರೋ ಸಿದ್ದರಾಮಯ್ಯ ಏನು ಮಾತಾಡ್ತಿದಾರೆ ಅನ್ನೋದರ ಬಗ್ಗೆ ನಾನು ದಾಖಲೆ ಬೇಕಾದ್ರೆ ಕೊಡ್ತೀನಿ. ಅಸ್ಪಶ್ಯರ ಬಗ್ಗೆ ಅವರು ಎಷ್ಟು ಕೀಳಾಗಿ ಮಾತಾಡಿದ್ದಾರೆ ಗೊತ್ತಾ ಎಂದು ಹೆಚ್‌ಡಿಕೆ ಪ್ರಶ್ನೆ ಮಾಡಿದರು. ನಾನು ಮುಖ್ಯಮಂತ್ರಿಯಾಗಿದ್ದಾಗ ದಲಿತ ಮಹಿಳೆಗೆ ಚಿಕಿತ್ಸೆ ಕೊಡಿಸಿ ನಮ್ಮ ಮನೆಯಲ್ಲೇ ಆರೈಕೆ ಮಾಡಿದ್ದೆವು ಎಂದು ಇದೇ ಸಂದರ್ಭದಲ್ಲಿ ಹೆಚ್ಡಿಕೆ ನೆನಪಿಸಿಕೊಂಡರು.

 

Share Post