Districts

ನಮಗೆ ಬಿಜೆಪಿ ಮಾರ್ಗದರ್ಶನ ಬೇಕಿಲ್ಲ; ಕಮಲ ನಾಯಕರಿಗೆ ಡಿಕೆಶಿ ಟಾಂಗ್‌

ಮೈಸೂರು; ಭಾರತ್‌ ಜೋಡೋ ಕಾರ್ಯಕ್ರಮದ ಬಗ್ಗೆ ಬಿಜೆಪಿ ಟೀಕೆ ಮಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಕ್ರೋಶ ಹೊರಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಮಗೆ ಬಿಜೆಪಿಯ ಮಾರ್ಗದರ್ಶನ ಬೇಕಿಲ್ಲ ಎಂದು ಹೇಳಿದ್ದಾರೆ.

ನಾವು ಸೋತಿರಬಹುದು. ಆದರೆ ನಮ್ಮಲ್ಲಿ ಯಾವುದೇ ಬಿರುಕಿಲ್ಲ. ನಮ್ಮ ಅಂತರಾಳ ಬಿಜೆಪಿಗೆ ಏನು ಗೊತ್ತು ಎಂದು ಡಿಕೆಶಿ ಪ್ರಶ್ನೆ ಮಾಡಿದ್ದಾರೆ. ಯಾರು ಬೇಕಾದರೂ ಎಷ್ಟು ಬೇಕಾದರೂ ಟೀಕೆ ಮಾಡಬಹುದು. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ತಿಳಿಸಿದರು.

Share Post