Districts

ಮಹಿಷ ದಸರಾಗೆ ಷರತ್ತುಬದ್ಧ ಅನುಮತಿ ನೀಡಿದ್ದೇವೆ; ಮೈಸೂರು ಪೊಲೀಸ್‌ ಆಯುಕ್ತ ರಮೇಶ್‌

ಮೈಸೂರು; ಮೈಸೂರಿನಲ್ಲಿ ಮಹಿಷ ದಸರಾ ಆಚರಿಸಲು ಷರತ್ತುಬದ್ಧ ಅನುಮತಿ ನೀಡಿದ್ದೇವೆ ಅಂತ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಮಾಡಲು ಅವಕಾಶ ನೀಡಿಲ್ಲ. ಮಹಿಷನ ಪ್ರತಿಮೆ ಬಳಿ ಬರುವುದಕ್ಕೂ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಮಹಿಷ ದಸರಾ ಆಚರಣೆಗೆ ಅವಕಾಶ ನೀಡುವಂತೆ ಮನವಿ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನ ಪುರಭವನದಲ್ಲಿ ಕಾರ್ಯಕ್ರಮ ನಡೆಸಲು ಷರತ್ತುಬದ್ಧ ಅನುಮತಿ ನೀಡಿದ್ದೇವೆ ಎಂದು ರಮೇಶ್‌ ಬಾನೋತ್‌ ಹೇಳಿದ್ದಾರೆ. ಆದ್ರೆ ಬೆಟ್ಟದ ಮೇಲೆ ಮಹಿಷಮೂರ್ತಿಗೆ ಪುಷ್ಪಾರ್ಚನೆ ಮಾಡಲು ಅನುಮತಿ ಕೇಳಿದ್ದಾರೆ. ಇದಕ್ಕೆ ವಿರುದ್ಧವಾಗಿ ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಂಡಿದ್ದಾರೆ. ಆದ್ರೆ, ಬೆಟ್ಟ ಹಾಗೂ ಸುತ್ತಮುತ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದರು.

Share Post