CrimeDistricts

ಕೋರ್ಟ್‌ ಶೌಚಾಲಯದಲ್ಲೇ ಪತ್ನಿಯ ಕತ್ತು ಸೀಳಿದ ಪತಿ

ಹೊಳೆನರಸೀಪುರ; ಕೋರ್ಟ್‌ ಆವರಣದಲ್ಲಿರುವ ಶೌಚಾಲಯದಲ್ಲೇ ಪಾಪಿ ಗಂಡನೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರದಲ್ಲಿ ನಡೆದಿದೆ. ಕತ್ತು ಸೀಳಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ ನಿಧನಳಾಗಿದ್ದಾಳೆ.

ಇಂದು ಮಧ್ಯಾಹ್ನ 12.30ರ ಸುಮಾರಿಗೆ ಈ ಕೃತ್ಯ ಎಸಗಲಾಗಿದೆ. ಹೊಳೆನರಸೀಪುರ ತಾಲ್ಲೂಕಿನ ತಟ್ಟೇಕೆರೆ ಗ್ರಾಮದ ಶಿವಕುಮಾರ ಎಂಬಾತ ಚನ್ನಾರಾಯಪಟ್ಟಣ ತಾಲ್ಲೂಕಿನ ನುಗ್ಗೇಹಳ್ಳಿ ಸಮೀಪದ ಚೈತ್ರಾಳನ್ನು ಆರು ವರ್ಷದ ಹಿಂದೆ ಮದುವೆಯಾಗಿದ್ದ. ಇವರಿಗೆ 2 ಹಾಗೂ 5 ವರ್ಷದ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. 3 ವರ್ಷಗಳಿಂದ ಗಂಡ–ಹೆಂಡತಿಯ ನಡುವೆ ಜಗಳ ನಡೆಯುತ್ತಿತ್ತು. ಹೀಗಾಗಿ, ಚೈತ್ರಾ ಮಕ್ಕಳನ್ನು ತಾಯಿ ಮನೆಯಲ್ಲಿ ಬಿಟ್ಟು, ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿದ್ದಳು.

ಚೈತ್ರ ವಿಚ್ಛೇದನಕ್ಕೆ ಅರ್ಜಿ ಹಾಕಿಕೊಂಡಿದ್ದಳು. ಇವರ ಅರ್ಜಿಯನ್ನು ಇಂದು ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನಕ್ಕೆ ತೆಗೆದುಕೊಳ್ಳಲಾಗಿತ್ತು. ನ್ಯಾಯಾಲಯ ಇವರ ವಿಚಾರಣೆ ನಡೆಸಿ, ಮುಂದಿನ ದಿನಾಂಕ ನೀಡಿ ಕಳುಹಿಸಿತ್ತು. ನ್ಯಾಯಾಲಯದಿಂದ ಹೊರಬಂದು ಚೈತ್ರಾ ಶೌಚಾಲಯಕ್ಕೆ ಹೋದಾಗ ಗಂಡ ಶಿವಕುಮಾರ್ ಈ ಕೃತ್ಯ ಎಸಗಿದ್ದಾನೆ. ಓಡಿಹೋಗುತ್ತಿದ್ದ ಆರೋಪಿಯನ್ನು ಬೆನ್ನಟ್ಟಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share Post