DistrictsPolitics

ಮೇ 13ರಂದು ಯಾವ ಡ್ಯಾಮ್​ ಒಡೆಯುತ್ತೆಂದು ತಿಳಿಯುತ್ತೆ: ಡಿಕೆಶಿಗೆ ಬಿವೈ ವಿಜಯೇಂದ್ರ ಟಾಂಗ್

ಮಂಡ್ಯ; ಬಿಜೆಪಿ ಡ್ಯಾಂ ಒಡೆದಿದೆ. ಎಲ್ಲಾ ನಾಯಕರು ಕಾಂಗ್ರೆಸ್‌ನತ್ತ ಹರಿದುಬರುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಇದಕ್ಕೆ ಟಾಂಗ್‌ ಕೊಟ್ಟಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು,ಮೇ 13ರಂದು ಯಾವ ಡ್ಯಾಮ್​ ಒಡೆಯುತ್ತೆ ಎಂದು ತಿಳಿಯುತ್ತದೆ ಎಂದು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ವಿಜಯೇಂದ್ರ ಅವರು ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಡುವಿಲ್ಲದೆ ಪ್ರಚಾರ ಕೈಗೊಂಡಿದ್ದಾರೆ. ಇಂದು ಪಾಂಡವಪುರದಲ್ಲಿ ಅವರು ಬಿಜೆಪಿ ಪರ ಮತಯಾಚನೆ ಮಾಡಿದರು. ವೀರೇಂದ್ರ ಪಾಟೀಲ್‌ ಅವರು 170ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಂಡುಬಂದಿದ್ದರು. ಆದ್ರೂ ಅಂದು ವೀರೇಂದ್ರ ಪಾಟೀಲರಿಗೆ ಕಾಂಗ್ರೆಸ್‌ ಮೋಸ ಮಾಡಿತ್ತು. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿತ್ತು. ಲಿಂಗಾಯತರ ಪರವಾಗಿ ಯಾವತ್ತೂ ಬಿಜೆಪಿ ಇರುತ್ತೆ. ಜೊತೆಗೆ ಎಲ್ಲಾ ಸಮುದಾಯಗಳಿಗೂ ಬಿಜೆಪಿ ನ್ಯಾಯ ಒದಗಿಸುತ್ತಾ ಬಂದಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Share Post