CrimeDistricts

ಇದ್ದಕ್ಕಿದ್ದಂತೆ ಕುಸಿದ ಕುಸ್ತಿಪಟು; ವಾಕಿಂಗ್‌ ಹೋಗಿದ್ದಾಗ ಹೃದಯಾಘಾತ

ಧಾರವಾಡ; ಹೃದಯಾಘಾತದಿಂದ ಯುವ ಕುಸ್ತಿಪಟು ಮೃತಪಟ್ಟಿರುವ ಘಟನೆ ಧಾರವಾಡ ನಗರದಲ್ಲಿ ನಡೆದಿದೆ. ಬೆಳಗ್ಗೆ ವಾಕಿಂಗ್ ಮಾಡಿ ಮನೆಗೆ ವಾಪಸ್ ಬರುತ್ತಿದ್ದಾಗ ಹೃದಯಾಘಾತವಾಗಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ‌.

   ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಪೈಲ್ವಾನ್ ಸಂಗಪ್ಪ ಬಳಿಗೇರ್ (28) ಮೃತ ಕುಸ್ತಿಪಟು. ಮೂಲತಃ ಬೆಳಗಾವಿ ಜಿಲ್ಲೆಯವರಾದ ಇವರು ಧಾರವಾಡದಲ್ಲಿ ನೆಲೆಸಿದ್ದರು. ಇಂದು ಬೆಳಗಿನ ಜಾವ ಧಾರವಾಡದ ಮದಿಹಾಳದ ಬಳಿ ಸ್ನೇಹಿತನ ಜೊತೆಗೆ ವಾಕಿಂಗ್​ಗೆ ತೆರಳಿ ಮನೆಗೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಹೃದಯಾಘಾತವಾಗುತ್ತಿದ್ದಂತೆ ನೆಲಕ್ಕೆ ಕುಸಿದು ಬಿದ್ದು ಸಂಗಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

Share Post