Districts

ಹುಬ್ಬಳ್ಳಿ ಗಲಭೆಗೆ ಅಲ್ತಾಫ್‌ ಹಳ್ಳೂರ ನೇರ ಕಾರಣ; ಮಾಜಿ ಸಿಎಂ ಯಡಿಯೂರಪ್ಪ

ದಾವಣಗೆರೆ; ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆಗೆ ಮುಸ್ಲಿಂ ಮುಖಂಡ ಅಲ್ತಾಫ್‌ ಹಳ್ಳೂರ ನೇರ ಕಾರಣ ಎಂದು ಮಾಜಿ ಸಿಎಂ ಯಡಿಯೂರಪ್ಪ ಆರೋಪ ಮಾಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಗೆ ಮುಸ್ಲಿಂ ನಾಯಕರೇ ನೇರ ಕಾರಣ ಎಂದು ಆರೋಪಿಸಿದರು.

ಮುಸ್ಲಿಂ ಮುಖಂಡ ಅಲ್ತಾಫ್‌ ಹಳ್ಳೂರ ಅವರ ಪ್ರಚೋದನೆಯಿಂದಲೇ ಈ ಗಲಭೆ ನಡೆದಿದೆ. ಕಾಂಗ್ರೆಸ್‌ ನಾಯಕರು ಅಮಾಯಕರನ್ನು ಬಂಧಿಸಬಾರದು ಎಂದು ಹೇಳುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಒಂದು ಬಾರಿ ಹುಬ್ಬಳ್ಳಿಗೆ ಹೋಗಿ ಬರಲಿ. ಅಲ್ಲಿನ ವಾಸ್ತವ ಸ್ಥಿತಿಯಲ್ಲಿ ಅವರು ತಿಳಿದುಕೊಳ್ಳಲಲಿ ಎಂದು ಯಡಿಯೂರಪ್ಪ ಹೇಳಿದರು.

Share Post