DistrictsPolitics

ಕಾಂಗ್ರೆಸ್‌ ತಿರುಕನ ಕನಸು ಕಾಣುತ್ತಿದೆ; ಯಡಿಯೂರಪ್ಪ

ದಾವಣಗೆರೆ; ಕಾಂಗ್ರೆಸ್‍ ನಾಯಕರು 2023ರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದು ಕನಸು ಕಾಣುತ್ತಿದ್ದಾರೆ. ಅದು ತಿರುಕನ ಕನಸು ಅಷ್ಟೇ ಎಂದು ಮಾಜಿ ಸಿಎಂ ಯಡಿಯೂರಪ್ಪ ಲೇವಡಿ ಮಾಡಿದ್ದಾರೆ. ದಾವಣಗೆರೆಯ ಜಗಳೂರಿನ ರಂಗಮಂದಿರದ ಮೈದಾನದಲ್ಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಅವರು ಮಾತನಾಡಿದರು.

ರಾಮಚಂದ್ರನ ಮೇಲಿನ ಪ್ರೀತಿಯಿಂದ ಇಲ್ಲಿದೆ ಬಂದಿದ್ದೇನೆ ಎಂದು ಯಡಿಯೂರಪ್ಪ,  ರಾಮಚಂದ್ರ  ಅವರು 3500 ಕೋಟಿ ರೂಪಾಯಿಗೂ ಅಧಿಕ ಅನುದಾನ ಕ್ಷೇತ್ರಕ್ಕೆ ತಂದಿದ್ದು, ಹೆಚ್ಚಿನ ಅಭಿವೃದ್ಧಿ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ 145ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೆ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರೋದು ಎಂದು ಯಡಿಯೂರಪ್ಪ ಇದೇ ವೇಳೆ ಹೇಳಿದರು.

 

 

Share Post