DistrictsPolitics

ಕೊರೊನಾ ವೇಳೆ 40 ಸಾವಿರ ಕೋಟಿ ಅವ್ಯವಹಾರ; ಯತ್ನಾಳ್ ಆರೋಪ

ವಿಜಯಪುರ; ಕೊರೊನಾ ಮೊದಲನೇ ಅಲೆ ವೇಳೆ  ಯಡಿಯೂರಪ್ಪ  ಮುಖ್ಯಮಂತ್ರಿ ಇದ್ದರು. ಈ ವೇಳೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಒಬ್ಬ ಕೊರೋನಾ ರೋಗಿಗೆ 8 ರಿಂದ 10 ಲಕ್ಷ ರೂಪಾಯಿ ಬಿಲ್ ಮಾಡಲಾಗಿತ್ತು. ನಮ್ಮ ಸರ್ಕಾರವಿದ್ದರೇನು, ಕಳ್ಳರು ಕಳ್ಳರೇ ಅಲ್ಲವಾ ಎಂದು ಪ್ರಶ್ನಿಸಿದ್ದಾರೆ.

 ಕೊರೊನಾ ವೇಳೆ 45 ರೂಪಾಯಿ ಮಾಸ್ಕ್​ಗೆ 485 ರೂಪಾಯಿ ನಿಗದಿಪಡಿಸಿದರು ಎಂದೂ ಅವರು ಆರೋಪ ಮಾಡಿದ್ದಾರೆ.

Share Post