DistrictsPolitics

ಕಾಂಗ್ರೆಸ್‌ ಅಂದರೇನೇ ಲೂಟಿಕೋರರ ಪಕ್ಷ; ಮಾಜಿ ಸಿಎಂ ಯಡಿಯೂರಪ್ಪ

ಬಳ್ಳಾರಿ: ಕಾಂಗ್ರೆಸ್ ಅಂದರೇನೇ ಲೂಟಿಕೋರರ ಪಕ್ಷ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿಯಲ್ಲಿ ನಡೆದ ಪರಿಶಿಷ್ಟ ಪಂಗಡದ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಹತ್ತು ಕ್ಷೇತ್ರಗಳಿವೆ. ಆದರೆ ಬಿಜೆಪಿ ೨೦೧೮ರಲ್ಲಿ ಗೆದ್ದಿದ್ದು ಕೇವಲ ಐದು ಸ್ಥಾನ. ಆದರೆ ಮುಂದಿನ ಚುನಾವಣೆಯಲ್ಲಿ ಹತ್ತಕ್ಕೆ ಹತ್ತೂ ಕ್ಷೇತ್ರಗಳಲ್ಲೂ ಗೆಲ್ಲಬೇಕು ಎಂದರು.

ಎಸ್‌.ಟಿ ಸಮುದಾಯದ ಅನೇಕ ವರ್ಷಗಳ ಬೇಡಿಕೆಯಾಗಿದ್ದ‌ ಮೀಸಲಾತಿ ಹೆಚ್ಚಿಸಿದ್ದೇವೆ. ವಾಲ್ಮೀಕಿ ಸಮುದಾಯಕ್ಕೆ ಪ್ರತ್ಯೇಕ ಸಚಿವಾಲಯ, ಜಯಂತಿ ಘೋಷಣೆ ಮಾಡಿದ್ದು ಕೂಡಾ ನಮ್ಮ ಸರ್ಕಾರ ಎಂದು ಯಡಿಯೂರಪ್ಪ ಹೇಳಿದರು. ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಈ ಸಮುದಾಯಕ್ಕೆ ಶೇ. 50ರಷ್ಟು ಸಬ್ಸಿಡಿ ಸಿಗುತ್ತಿದೆ. ಈ ಹಿಂದೆ ನಾನು ಸಿಎಂ ಆಗಿದ್ದಾಗ ಶ್ರೀರಾಮುಲು ಮತ್ತು ಜನಾರ್ಧನರೆಡ್ಡಿ ಅವರು ಕೇಳಿದ ಪ್ರತಿಯೊಂದು ಕೆಲಸವನ್ನೂ ಮಾಡಿದ್ದೇನೆ ಎಂದು ಯಡಿಯೂರಪ್ಪ ಹೇಳಿದರು.

ಈ ಸಮಾವೇಶ ನೋಡಿ ಕಾಂಗ್ರೆಸ್ ನವರಿಗೆ ಆಘಾತವಾಗಿದೆ ಎಂದು ಯಡಿಯೂರಪ್ಪ, ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗ ಬರೀ ಲೂಟಿ ಮಾಡಿದರು ಎಂದು ಆರೋಪಿಸಿದರು.

Share Post