DistrictsPolitics

Yogi; ಕಾಂಗ್ರೆಸ್‌ ಪಕ್ಷ ಹಿಂದೂ ನಂಬಿಕೆಗಳ ಜೊತೆ ಆಟವಾಡುತ್ತಿದೆ; ಯೋಗಿ ಆದಿತ್ಯನಾಥ್

ಚಿಕ್ಕಮಗಳೂರು; ಕಾಂಗ್ರೆಸ್‌ ಪಕ್ಷ ಹಿಂದೂ ನಂಬಿಕೆಗಳ ಜೊತೆ ಆಟವಾಡುತ್ತಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಆರೋಪ ಮಾಡಿದ್ದಾರೆ. ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿ ಮಾತನಾಡಿರುವ ಅವರು ಬಜರಂಗದಳ ನಿಷೇಧ ಮಾಡುತ್ತೇವೆಂದು ಹೇಳಿರುವ ಕಾಂಗ್ರೆಸ್‌ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ.

‌  ನಾವು ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿರುವ ಕಾರಣಕ್ಕಾಗಿ ಪಿಎಫ್‌ಐ ಸಂಘಟನೆಯನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತುಹಾಕಿದೆ. ಡಬಲ್‌ ಎಂಜಿನ್‌ ಸರ್ಕಾರ ಇದ್ದುದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಕಾಂಗ್ರೆಸ್‌ ಪಕ್ಷ ಹಿಂದೂಗಳ ಭಾವನೆಗಳ ಮೇಲೆ ಆಟವಾಡುತ್ತಿದೆ. ಬಜರಂಗದಳ ಸಂಘಟನೆಯನ್ನು ನಿಷೇಧ ಮಾಡುತ್ತೇವೆ ಎಂದು ಹೇಳುತ್ತಿದೆ ಅಂತ ಆಕ್ರೋಶ ಹೊರಹಾಕಿದ್ದಾರೆ.

Share Post