Districts

ಪ್ರಧಾನಿ ಭದ್ರತಾ ವೈಫಲ್ಯ; ಮೈಸೂರಿನಲ್ಲಿ ಯುವ ಬಿಜೆಪಿ ಪ್ರತಿಭಟನೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಪಂಜಾಬ್‌ ಭೇಟಿ ವೇಳೆ ಭದ್ರತಾ ವೈಫಲ್ಯ ಆಗಿರುವುದನ್ನು ಖಂಡಿಸಿ, ಮೈಸೂರಿನಲ್ಲಿ ಯುವ ಬಿಜೆಪಿ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಂಜಾಬ್‌ ಮುಖ್ಯಮಂತ್ರಿ ಪರಂಜಿತ್‌ ಸಿಂಗ್‌ ಅವರ ಅಣಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪಂಜಾಬ್‌ ಸಿಎಂ ಪ್ರತಿಕೃತಿ ಮೇಲೆ ಟ್ರ್ಯಾಕ್ಟರ್‌ ಹರಿಸಿ ಅವರ ವಿರುದ್ಧ ಘೋಷಣೆ ಕೂಗಿದರು.

ಕೆ ಆರ್ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮನು, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಕಿರಣ್ ಗೌಡ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಈ ವೇಳೆ ಮಾತನಾಡಿದ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಿರಣ್‌ ಗೌಡ, ಪಂಜಾಬ್‌ ಕಾಂಗ್ರೆಸ್‌ ಸರ್ಕಾರ ಪ್ರಧಾನಿ ಮೋದಿಯವರಿಗೆ ಅವಮಾನ ಮಾಡಿದೆ. ಹೀಗಾಗಿ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

Share Post