CrimeDistricts

ಸುಳ್ಯದ ಹಳ್ಳಿಯಲ್ಲಿ ತಲ್ವಾರ್‌ ಹಿಡಿದು ಓಡಾಡಿದ ಯುವಕ; ಜನರಲ್ಲಿ ಆತಂಕ

ಸುಳ್ಯ; ಹಿಂದೂ ಸಂಘಟನೆ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆಯಿಂದಾಗಿ ಸುಳ್ಯ ತಾಲ್ಲೂಕಿನ ಜನ ಆತಂಕದಲ್ಲಿದ್ದಾರೆ. ಹೀಗಿರುವಾಗಲೇ ಯುವಕನೊಬ್ಬ ತಲ್ವಾರ್‌ ಹಿಡಿದುಕೊಂಡು ಓಡಾಡಿ ಆತಂಕವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಸುಳ್ಯ ತಾಲ್ಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಸಂದೀಪ್‌ ಎಂಬಾತ ತಲ್ವಾರ್‌ ಹಿಡಿದುಕೊಂಡು ಓಡಾಡಿದ್ದಾನೆ.

ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ದಾಂಜಲಿಯ ಬ್ಯಾನರ್ ಅಳವಡಿಸಿಲು ಕನಕಮಜಲು ಪೇಟೆಯಲ್ಲಿ ಅನುಮತಿ ನೀಡಿಲ್ಲ ಎಂನ ಕೋಪಕ್ಕೆ ತಲ್ವಾರ್ ಹಿಡಿದು ನಡೆದಾಡಿದ್ದಾನೆ ಎಂದು ಹೇಳಲಾಗಿದೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Share Post