DistrictsPolitics

ಕಡೂರಿನಲ್ಲಿ ವೈಎಸ್‌ವೈ ದತ್ತಾ ಜೆಡಿಎಸ್‌ ಅಭ್ಯರ್ಥಿ ಫಿಕ್ಸ್‌

ಕಡೂರು; ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ವೈಎಸ್‌ವಿ ದತ್ತಾ ಘರ್‌ ವಾಪಸಿಯಾಗಿದ್ದಾರೆ. ಅವರೇ ಕಡೂರು ಜೆಡಿಎಸ್‌ ಅಭ್ಯರ್ಥಿಯಾಗಲಿದ್ದಾರೆ. ಈಗಾಗಲೇ ಈ ಬಗ್ಗೆ ಮಾತುಕತೆಗಳಾಗಿದ್ದು, ಅಧಿಕೃತವಾಗಿ ಜೆಡಿಎಸ್‌ ಅಭ್ಯರ್ಥಿ ಎಂದು ಪ್ರಕಟಿಸುವುದಷ್ಟೇ ಬಾಕಿ ಇದೆ.

ಇನ್ನು ಇಂದು ಯಗಟಿ ಗ್ರಾಮದಲ್ಲಿ ದತ್ತಾ ಬೆಂಬಲಿಗರ ಸಭೆ ನಡೆಯಿತು. ಈ ಸಭೆಯಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ರೇವಣ್ಣ ಅವರು ಪಾಲ್ಗೊಂಡಿದ್ದರು. ಸಭೆ ನಂತರ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ದತ್ತಾ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವಂತೆ ದೇವೇಗೌಡರು ಹೇಳಿದ್ದಾರೆ. ಹೀಗಾಗಿ ಕಡೂರಿನಲ್ಲಿ ಅವರೇ ಕ್ಯಾಂಡಿಡೇಟ್‌. ಇಂದಿನಿಂದಲೇ ಅವರು ಪ್ರಚಾರ ಆರಂಭಿಸಬಹುದು ಎಂದು ಹೇಳಿದ್ದಾರೆ.

ಇದೇ ವೇಳೆ ಮಾತನಾಡಿದ ವೈಎಸ್‌ವಿ ದತ್ತಾ, ದೇವೇಗೌಡರು ಪಕ್ಷೇತರವಾಗಿ ಸ್ಪರ್ಧಿಸುವುದು ಬೇಡ ಎಂದಿದ್ದಾರೆ. ದೇವೇಗೌಡರ ಮಾತಿಗೆ ನಾನು ಬೆಲೆ ಕೊಡುತ್ತೇನೆ ಎಂದು ಹೇಳುವ ಮೂಲಕ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವುದನ್ನು ಖಚಿತಪಡಿಸಿದ್ದಾರೆ.

Share Post