DistrictsPolitics

ಪಕ್ಷೇತರ ಅಭ್ಯರ್ಥಿಯಾಗಲು ದತ್ತಾ ತೀರ್ಮಾನ

ಚಿಕ್ಕಮಗಳೂರು; ಕಡೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ವೈಎಸ್ ವಿ ದತ್ತಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದಾರೆ. ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ.

ಇಂದು ಕಡೂರಿನಲ್ಲಿ ವೈಎಸ್ ವಿ ದತ್ತಾ ಸ್ವಾಭಿಮಾನಿ ಸಮಾವೇಶ ನಡೆಸಿದರು. ಈ ವೇಳೆ ಬೆಂಬಲಿಗರ ಅಭಿಪ್ರಾಯದಂತೆ ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದರು. ಟವೆಲ್ ಗುರುತಿನಿಂದ ಸ್ಪರ್ಧೆ ಮಾಡುವುದಾಗಿ ಅವರು ಹೇಳಿದರು.

Share Post