BengaluruEconomyPolitics

ಜನರನ್ನು ಮರಳು ಮಾಡಲು ಕೇಂದ್ರ ಬಜೆಟ್‌ ಮಂಡನೆ ಮಾಡಲಾಗಿದೆ; ಎಚ್‌.ಡಿ.ಕುಮಾರಸ್ವಾಮಿ

ದಾವಣಗೆರೆ; ಜನರನ್ನು ಮರಳು ಮಾಡಲು ಕೇಂದ್ರ ಬಜೆಟ್‌ ಮಂಡನೆ ಮಾಡಲಾಗಿದೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈಗ ಬಜೆಟ್ ಘೋಷಣೆ ಆದ್ರೂ ಹಣಕಾಸು ಬಿಡುಗಡೆ ಏಪ್ರಿಲ್ ಮೇಲೆ ಶುರುವಾಗುತ್ತೆ ಎಂದು ಹೇಳಿದರು.

ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಹೆಚ್ಡಿಕೆ ಮಾತನಾಡಿದರು. ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್. ರಾಜ್ಯದಲ್ಲಿ ಚುನಾವಣೆ ಇರೋದ್ರಿಂದ ಕೆಲವು ಘೋಷಣೆಗಳನ್ನು ಮಾಡಲಾಗಿದೆ. ಆದ್ರೆ ಬಜೆಟ್ ನಲ್ಲಿ ಘೋಷಣೆ ಮಾಡಿದ ಎಲ್ಲ ಯೋಜನೆಗಳು ಜಾರಿ ಆಗಬೇಕಲ್ಲ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಭದ್ರಾ, ಮಹಾದಾಯಿ, ಕೃಷ್ಣ ಏನೇ ಘೋಷಣೆ ಮಾಡಿದ್ರೂ ಮೊದಲೇ ಮಾಡಬೇಕಿತ್ತು. ಇಂದಿನ ಕಾರ್ಯಕ್ರಮ ಜಾರಿಗೆ ತರಲು ಮುಂದಿನ ಸರ್ಕಾರ ಬರಬೇಕು. ಕೇಂದ್ರದ ಘೋಷಣೆ, ಘೋಷಣೆ ಆಗಿಯೇ ಉಳಿಯತ್ತೆ. ಕೇಂದ್ರದ ಹಣ ಬಿಡುಗಡೆ ಆಗುವುದರ ಒಳಗೆ ಚುನಾವಣಾ ನೀತಿ ಸಂಹಿತೆ ಬರುತ್ತೆ ಎಂದು ಹೆಚ್ಡಿಕೆ ಹೇಳಿದ್ದಾರೆ.

Share Post