Economy

ಇದು ಪ್ರಗತಿ ಪರ ಬಜೆಟ್‌, ಎಲ್ಲಾ ವರ್ಗಕ್ಕೂ ಆದ್ಯತೆ ಕೊಟ್ಟಿದೆ; ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

ಲಖನೌ: ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹಾಡಿ ಹೊಗಳಿಸಿದ್ದಾರೆ. ಇದು ಪ್ರಗತಿ ಪರ ಬಜೆಟ್‌ ಎಂದು ಬಣ್ಣಿಸಿರುವ ಯೋಗಿ ಆದಿತ್ಯನಾಥ್‌, ಎಲ್ಲಾ ವರ್ಗಗಳಿಗೂ ಬಜೆಟ್‌ನಲ್ಲಿ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ವಿಶೇಷವಾಗಿ ರೈತರು, ಮಹಿಳೆಯರು, ಯುವಕರಿಗೆ ಪ್ರಯೋಜನವಾಗುವ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಕನಿಷ್ಠ ಬೆಂಬಲ ಬೆಲೆಯ ಜೊತೆಗೆ ರೈತರ ಆದಾಯ ದ್ವಿಗುಣಗೊಳಿಸಲು ಬಜೆಟ್‌ನಲ್ಲಿ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಯೋಗಿ ಆದಿತ್ಯನಾಥ್‌ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಇನ್ನು ಯುವಕರಿಗೆ 60 ಲಕ್ಷ ಉದ್ಯೋಗ ಸೃಷ್ಟಿ, ಮಿಷನ್ ಶಕ್ತಿಯಂತಹ ಮಹಿಳಾ ಸಬಲೀಕರಣದ ಕ್ರಮಗಳು ನಮ್ಮ ಆರ್ಥಿಕತೆಯನ್ನು ಹೆಚ್ಚಿಸುತ್ತವೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

Share Post