CrimeHealthNational

ಕಾಲ್ತುಳಿದಲ್ಲಿ ಸಾವನ್ನಪ್ಪಿದ ಹೆಣಗಳ ರಾಶಿ ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ಗೆ ಹೃದಯಾಘಾತ!

ಹತ್ರಾಸ್; ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಿನ್ನೆ ಭೀಕರ ದುರಂತ ನಡೆದಿದೆ.. ಇಲ್ಲಿ ನಡೆದ ಸತ್ಸಂಗ ಕಾರ್ಯಕ್ರಮದ ವೇಳೆ ಕಾಲ್ತುಳಿತ ಉಂಟಾಗಿ 116 ಮಂದಿ ಸಾವನ್ನಪ್ಪಿದ್ದಾರೆ.. ಹೀಗಿರುವಾಗಲೇ ಹೆಣಗಳ ರಾಶಿ ನೋಡಿ ಪೊಲೀಸ್‌ ಕಾನ್ಸ್‌ಟೇಬಲ್‌ ಒಬ್ಬರು ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ..

ರಜನೀಶ್‌ ಎಂಬ ಪೊಲೀಸ್‌ ಕಾನ್ಸ್‌ಟೇಬಲ್‌ ಹೃಯಘಾತಕ್ಕೆ ಬಲಿಯಾದವರು.. ಇವರನ್ನು ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಭದ್ರತೆಗೆ ನಿಯೋಜಿಸಲಾಗಿತ್ತು.. ಆಸ್ಪತ್ರೆಯಲ್ಲಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳ ರಾಶಿ ಹಾಕಲಾಗಿತ್ತು.. ಅದನ್ನು ನೋಡುತ್ತಿದ್ದಂತೆ ರಜನೀಶ್‌ಗೆ ಹೃದಯಾಘಾತವಾಗಿದ್ದು, ಅವರು ಅಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ..

ರಜನೀಶ್‌ ಅವರು ಅವಘರ್‌ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಭಾಗವಾಗಿದ್ದು, ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು.

Share Post