BengaluruHealth

ಕಿತ್ತೂರು ಉತ್ಸವ ಜ್ಯೋತಿ ಬೆಳಗುವ ವೇಳೆ ಸಿಎಂ ಬಟ್ಟೆಗೆ ಬೆಂಕಿ!

ಬೆಂಗಳೂರು; ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿ ತಗುಲಿದೆ.. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್‌ ಜ್ಯೋತಿ ಬೆಳಗುವ ಮೂಲಕ ಉದ್ಘಾಟನೆ ಮಾಡಿದರು.. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರ ಬಟ್ಟೆಗೆ ಬೆಂಕಿ ತಗುಲಿದೆ..
ಇದನ್ನು ಕಂಡ ಗನ್‌ ಮ್ಯಾನ್‌ ಕೂಡಲೇ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.. ಇದರಿಂದಾಗಿ ಅನಾಹುತ ತಪ್ಪಿದೆ.. ಅಮಾವಾಸ್ಯೆಯ ದಿನವೇ ಇಂತಹದ್ದೊಂದು ಘಟನೆ ನಡೆದಿದೆ.. ಸಿದ್ದರಾಮಯ್ಯ ಅವರಿಗೆ ಸಂಕಷ್ಟದ ಸಮಯದಲ್ಲಿ ಇಂತಹದ್ದೊಂದು ಅಹಿಕರ ಘಟನೆ ನಡೆದಿರುವುದು ಚರ್ಚೆಗೆ ಕಾರಣವಾಗಿದೆ..
ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ಇಂದು ರಥಕ್ಕೆ ಬೆಂಗಳೂರು ವಿಧಾನಸೌಧದ ಮುಂಭಾಗ ಹಸಿರು ನಿಶಾನೆ ತೋರಲಾಯಿತು.. ಈ ವೇಳೆ ಪಕ್ಕದಲ್ಲೇ ಇಡಲಾಗಿದ್ದು ದೀಪಕ್ಕೆ ಸಿದ್ದರಾಮಯ್ಯ ಅವರ ಶಲ್ಯ ತಗುಲಿ ಅದಕ್ಕೆ ಬೆಂಕಿ ಹೊತ್ತಿಕೊಂಡಿದೆ.. ಇದನ್ನು ನೋಡುತ್ತಲೇ ಗನ್‌ಮ್ಯಾನ್‌ ಅದನ್ನು ನಂದಿಸುವ ಕೆಲಸ ಮಾಡಿದ್ದಾರೆ..

Share Post