DistrictsHealth

ಮದ್ದೂರಿನ ವ್ಯಕ್ತಿಗೆ ಕೊರೋನಾ ಸೋಂಕು ದೃಢ; ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ಮಂಡ್ಯ; ಕೆಲ ದಿನಗಳಿಂದ ಕೇರಳದಲ್ಲಿ ಭೀತಿ ಹುಟ್ಟಿಸಿರುವ ಕೊರೋನಾ ಹೊಸ ತಳಿ ಈಗ ರಾಜ್ಯಕ್ಕೂ ಕಾಲಿಟ್ಟಿದೆ. ಮದ್ದೂರು ತಾಲ್ಲೂಕಿನ ವ್ಯಕ್ತಿಗೆ ಕೊರೋನಾ ಇರುವ ದೃಢಪಟ್ಟಿದೆ. ಇದರಿಂದಾಗಿ ಸಾರ್ವಜನಿಕರಲ್ಲಿ ಆತಂಕ ಶುರುವಾಗಿದೆ. ಕೊರೊನಾ ರೂಪಾಂತರಿ JN.1 ಪತ್ತೆಯಾಗಿದ್ದು, ಮಂಡ್ಯ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಕೊರೊನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಟೆಸ್ಟಿಂಗ್‌ ಹೆಚ್ಚಳ ಮಾಡಲಾಗಿದೆ. 

ಮದ್ದೂರಿನ ವ್ಯಕ್ತಿ ಜ್ವರದ ಹಿನ್ನೆಲೆಯಲ್ಲಿ ವಿಮ್ಸ್‌ ಆಸ್ಪತ್ರೆಗೆ ಬಂದಿದ್ದರು. ಅವರಿಗೆ ಕೊರೊನಾದ ಯಾವ ಲಕ್ಷಣಗಳೂ ಇರಲಿಲ್ಲ. ಆದ್ರೆ ನಿಯಮದ ಪ್ರಕಾರ ಕೊರೋನಾ ಟೆಸ್ಟ್‌ ಮಾಡಿದ್ದರಿಂದ ಆತನಲ್ಲಿ ಪಾಸಿಟಿವ್‌ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆತನ ಕುಟುಂಬದ ಎಲ್ಲರಿಗೂ RTPCR ಟೆಸ್ಟ್‌ ಮಾಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಸೋಂಕಿತ ಗುಣಮುಖರಾಗಿದ್ದಾರೆ ಎಂದೂ ಮಾಹಿತಿ ಸಿಕ್ಕಿದೆ.

 

Share Post