HealthNationalTechnology

ಹೂಡಿಕೆದಾರರಿಗೆ ಎಲ್ಲಾ ಸೌಲಭ್ಯ ಕಲ್ಪಿಸಲು ಸಿದ್ಧ; ನಿರಾಣಿ

ಹೈದರಾಬಾದ್; ಹೈದರಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ಕೈಗಾರಿಕಾ ಸಚಿವ ಮರುಗೇಶ್‌ ನಿರಾಣಿ ಹಾಗೂ ಭಾರತ್ ಬಯೋಟೆಕ್‌ನ ಅಧ್ಯಕ್ಷ ಡಾ. ಕೃಷ್ಣ ಎಂ. ಎಲ್ಲ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಹೂಡಿಕೆಗೆ ಆಸಕ್ತಿ ತೋರುವ ಹಾಗೂ ಉತ್ತಮ ವ್ಯವಹಾರಕ್ಕೆ ಒತ್ತು ನೀಡುವವರಿಗೆ ರಾಜ್ಯ ಸರ್ಕಾರದಿಂದ ಎಲ್ಲಾ ತರದ ಸೌಲಬ್ಯ ಒದಗಿಸುತ್ತೇವೆ ಎಂದು ಸಚಿವ ನಿರಾಣಿ ಭರವಸೆ ನೀಡಿದ್ದಾರೆ.

ಭಾರತ್‌ ಬಯೋಟೆಕ್‌ ಅಧ್ಯಕ್ಷರಿಗೆ ರಾಜ್ಯದಲ್ಲಿ ಹೂಡಿಕೆ ಹಾಗೂ ಉದ್ಯಮ‌ ವಿಸ್ತರಣೆಗೆ ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಇದೇ ನವೆಂಬರ್ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಈ ಸಭೆಗೆ ಭಾರತ್‌ ಬಯೋಟೆಕ್‌ ಅಧ್ಯಕ್ಷ ಕೃಷ್ಣ ಅವರನ್ನು ಆಹ್ವಾನಿಸಿದರು.

ಇದೇ ವೇಳೆ ಮಾತನಾಡಿರುವ ಕೃಷ್ಣ ಅವರು, ಉದ್ಯಮ ಮಾಡಲು ಪೂರಕ ವಾತಾವರಣ ಇರುವ ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡುವ ಉದ್ದೇಶ ಇದೆ ಎಂದು ಅಬಿಪ್ರಾಯ ಪಟ್ಟಿದ್ದಾರೆ.

 

Share Post