BengaluruHealth

ಕೊರೊನಾ ಹೆಚ್ಚಾದ್ರೆ ಸ್ಕೂಲ್ ಬಂದ್:ಶಿಕ್ಷಣ ಸಚಿವ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಒಮಿಕ್ರಾನ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಶಾಲೆಗಳನ್ನು ಬಂದ್‌ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.  ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಈ ಬಗ್ಗೆ ತಜ್ಞರಿಂದ ಪ್ರತಿದಿನ ವರದಿ ಪಡೆಯುತ್ತಿದ್ದೇವೆ. ತಜ್ಞರ ನೀಡಿರುವ ಸಲಹೆ ಮೇರೆಗೆ ಸದ್ಯಕ್ಕೆ ಯಾವುದೇ ಆತಂಕ ಬೇಡ, ಕೋವಿಡ್‌ ಪ್ರಕರಣಗಳು ಹೆಚ್ಚಾದ್ರೆ ಮಾತ್ರ ಶಾಲೆಗಳನ್ನು ಬಂದ್‌ ಮಾಡುತ್ತೇವೆ. ಈ ವಿಚಾರದ ಬಗ್ಗೆ ಪೋಷಕರು ಯಾವುದೇ ರೀತಿ ಆತಂಕ ಪಡುವುದು ಬೇಡ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.

 

 

Share Post