HealthNational

ತೆಲಂಗಾಣ ಸಿಎಂ ಕೆಸಿಆರ್‌ಗೆ ಹೊಟ್ಟೆನೋವು; ಆಸ್ಪತ್ರೆಗೆ ದಾಖಲು

ಹೈದರಾಬಾದ್; ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕಳೆದ ರಾತ್ರಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತೆಲಂಗಾಣ ಸರ್ಕಾರದ ಅಧಿಕಾರಿಯೊಬ್ಬರು ಈ ವಿಚಾರವನ್ನು ದೃಢಪಡಿಸಿದ್ದಾರೆ.

ಎಐಜಿ ಆಸ್ಪತ್ರೆಯಲ್ಲಿ ಕೆ.ಚಂದ್ರಶೇಖರ ರಾವ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹೊಟ್ಟೆಯಲ್ಲಿ ಸಣ್ಣದೊಂದು ಹುಣ್ಣಿದೆ ಎಂದು ಪರೀಕ್ಷೆ ವೇಳೆ ತಿಳಿದುಬಂದಿದೆ. ಅದು ಬಿಟ್ಟರೆ ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಹುಣ್ಣಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಶೀಘ್ರದಲ್ಲೇ ಗುಣಮುಖರಾಗಿ ಅವರು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗುತ್ತಾರೆ ಎಂದು ವೈದ್ಯರು ಹೇಳಿದ್ದಾರೆ. ತೆಲಂಗಾಣ ಸಿಎಂ ಶೀಘ್ರ ಗುಣಮುಖರಾಗಬೇಕೆಂದು ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಹಾಗೂ ಹಲವು ಗಣ್ಯರು ಹಾರೈಸಿದ್ದಾರೆ.

Share Post