DistrictsHealth

ವಾಂತಿ, ಭೇದಿಯಿಂದ ಮೂವರ ದುರ್ಮರಣ, 11 ಮಂದಿ ಅಸ್ವಸ್ಥ!

ತುಮಕೂರು; ತುಮಕೂರು ಜಿಲ್ಲೆಯಲ್ಲಿ ದೇವರ ಪ್ರಸಾದ ಸೇವಿಸಿ, ವಾಂತಿ, ಭೇದಿಯಿಂದ ಮೂವರು ಸಾವನ್ನಪ್ಪಿದ್ದು, 11 ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ.. ಮಧುಗಿರಿ ಬಳಿಯ ಬುಳಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ..

ಇದನ್ನೂ ಓದಿ; ಭಾರತದಲ್ಲಿ ಟೆಲಿಗ್ರಾಮ್‌ ಆ್ಯಪ್ ನಿಷೇಧಕ್ಕೆ ಚಿಂತನೆ!

ಶ್ರಾವಣಮಾಸದ ಹಿನ್ನೆಲೆಯಲ್ಲಿ ಶನಿವಾರ ಗ್ರಾಮದಲ್ಲಿ ದೇವರ ಉತ್ಸವ ಆಯೋಜನೆ ಮಾಡಲಾಗಿತ್ತು.. ಮುತ್ತರಾಯಸ್ವಾಮಿ, ಕರಿಯಮ್ಮ, ಭೂತಪ್ಪ ಆರತಿ ಉತ್ಸವದಲ್ಲಿ ಪ್ರಸಾದ ವಿತರಣೆ ಮಾಡಲಾಗಿತ್ತು.. ಇದು ತಿಂದವರದಲ್ಲಿ ಫುಡ್‌ ಪಾಯ್ಸನ್‌ ಆಗಿದೆ.. ಇದರಿಂದಾಗಿ ವಾಂತಿ, ಭೇದಿಯಾಗಿ ಮೂವರು ಸಾವನ್ನಪ್ಪಿದ್ದಾರೆ.. 11 ಮಂದಿ ತೀವ್ರ ಅಸ್ವಸ್ಥರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..

ಇದನ್ನೂ ಓದಿ; ವಿಪರೀತ ಖರ್ಚು ಮಾಡಿಸುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ ಪತಿ!

ಬುಳಸಂದ್ರ ಗ್ರಾಮದ ತಿಪ್ಪಮ್ಮ (40), ತಿಮ್ಮಕ್ಕ (85) ಗಿರಿಯಮ್ಮ (75) ಸಾವನ್ನಪ್ಪಿದವರು ಎಂದು ತಿಳಿದುಬಂದಿದೆ.. ಗ್ರಾಮಕ್ಕೆ ಜಿಲ್ಲಾ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Share Post