HealthNational

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಕ್ತವಾಂತಿ; ಪ್ರಯಾಣಿಕ ಸಾವು..!

ನವದೆಹಲಿ; ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕರೊಬ್ಬರಿಗೆ ರಕ್ತವಾಂತಿಯಾಗಿದ್ದು, ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆಸ್ಪತ್ರೆಗೆ ಸಾಗಿಸುವ ವೇಳೆಗೆ ಪ್ರಯಾಣಿಕ ಮೃತಪಟ್ಟಿರುವ ಘಟನೆ ನಾಗ್ಪುರದಲ್ಲಿ ನಡೆದಿದೆ.

ಇಂಡಿಗೋ ವಿಮಾನ ಮುಂಬೈನಿಂದ ರಾಂಚಿಗೆ ತೆರಳುತ್ತಿತ್ತು. ಇದೇ ವೇಳೆ ಪ್ರಯಾಣಿಕರೊಬ್ಬರ ಆರೋಗ್ಯದಲ್ಲಿ ಏರುಪೇರಾಗಿದೆ. ಪ್ರಯಾಣಿಕ ರಕ್ತವಾಂತಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಅವರನ್ನು ಆಸ್ಪತ್ರೆಗೂ ಸಾಗಿಸಲಾಯಿತು. ಆದ್ರೆ ಅಷ್ಟರಲ್ಲಾಗಲೇ ಪ್ರಯಾಣಿಕ ಮೃತಪಟ್ಟಿದ್ದಾನೆ.

ದೇವಾನಂದ್‌ ತಿವಾರಿ ಎಂಬುವವರೇ ಸಾವನ್ನಪ್ಪಿದವರು. 62 ವರ್ಷದ ಇವರು ಕ್ಷಯರೋಗದಿಂದ ಬಳಲುತ್ತಿದ್ದರು. ಈ ಕಾರಣಕ್ಕಾಗಿಯೇ ಈ ರೀತಿ ಆಗಿರಬಹುದು ಎಂದು ಹೇಳಲಾಗಿದೆ.

 

Share Post