International

ಹಿಜಾಬ್‌ ವಿವಾದ; ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್‌ ಹಾಡಿಹೊಗಳಿದ ಅಲ್‌ ಖೈದಾ ಉಗ್ರ ಜವಾಹರಿ

ನವದೆಹಲಿ: ಹಿಜಾಬ್‌ ವಿವಾದದ ವೇಳೆ ಕಾಲೇಜು ಆವರಣದಲ್ಲಿ ಅಲ್ಲಾಹು ಅಕ್ಬರ್‌ ಎಂದು ಕೂಗಿದ್ದ ಮಂಡ್ಯದ ಮುಸ್ಕಾನ್‌ ಭಾರತದ ಶ್ರೇಷ್ಠ ಮಹಿಳೆ ಎಂದು ಅಲ್‌ ಖೈದಾ ಮುಖ್ಯಸ್ಥ ಅಯ್ಮಾನ್‌ ಜವಾಹರಿ ಹೇಳಿದ್ದಾನೆ. ಈ ಬಗ್ಗೆ ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ ಆತ ಭಾರತೀಯ ಮುಸ್ಲಿಂರ ಮೇಲೆ ದಬ್ಬಾಳಿಕೆ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾನೆ.

ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಖಾನ್ ಬುರ್ಖಾ ಧರಿಸುವವರನ್ನು ವಿರೋಧಿಸುವವರ ವಿರುದ್ಧವೇ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾಳೆ. ಆಕೆ ಭಾರತದ ಶ್ರೇಷ್ಠ ಮಹಿಳೆ ಎಂದು ಉಗ್ರ ಅಯ್ಮಾನ್‌ ಜವಾಹರಿ ಶ್ಲಾಘಿಸಿದ್ದಾನೆ. ಅಲ್ಲದೆ ಮುಸ್ಕಾನ್‍ ಹೊಗಳಿ ರಚಿಸಿದ ಕವನವನ್ನು ಕೂಡಾ ಮೋಸ್ಟ್‌ ವಾಂಟೆಡ್‌ ಉಗ್ರ ಜವಾಹರಿ ಓದಿದ್ದಾನೆ. ಈ ಕವಿತೆಯಲ್ಲಿ ಮುಸ್ಕಾನ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಗೂ ವೀಡಿಯೋಗಳನ್ನು ನೋಡುವ ಮೂಲಕ ತಿಳಿದುಕೊಂಡಿದ್ದೇನೆ. ಇವಳಿಂದ ತುಂಬಾ ಪ್ರಭಾವಿತರಾಗಿದ್ದೇನೆ ಎಂಬ ಸಾಲಿದೆ ಎಂದೂ ಹೇಳಿದ್ದಾನೆ.

Share Post