International

ಕೆನಡಾದಲ್ಲಿ ಭೀಕರ ಅಪಘಾತ; ಐವರು ಭಾರತೀಯರ ಸಾವು..!

ನವದೆಹಲಿ: ಕೆನಡಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದು, ವಿದ್ಯಾರ್ಥಿಗಳ ಸಾವಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸಂತಾಪ ಸೂಚಿಸಿದ್ದಾರೆ.
ಕೆನಡಾದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಗೊಂಡವರ ಚೇತರಿಕೆಗೆ ಪ್ರಾರ್ಥಿಸುತ್ತೇನೆ. ಭಾರತ ಸರ್ಕಾರವು ಎಲ್ಲಾ ಅಗತ್ಯ ಬೆಂಬಲ ಹಾಗೂ ಸಹಾಯವನ್ನು ಒದಗಿಸುತ್ತದೆ’ ಎಂದು ಸಚಿವ ಜೈಶಂಕರ್‌ ಟ್ವೀಟ್ ಮಾಡಿದ್ದಾರೆ.

ಕೆನಡಾದಲ್ಲಿರುವ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಪ್ರಕಾರ, ಶನಿವಾರ ಟೊರಾಂಟೊ ಬಳಿ ಅಪಘಾತ ಸಂಭವಿಸಿದ್ದು, ಐವರು ಸಾವಿಗೀಡಾಗಿದ್ದಾರೆ. ಗಾಯಗೊಂಡಿರುವ ಇಬ್ಬರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post