International

OPERATION GANGA; ರಾಷ್ಟ್ರಪತಿ ಕೋವಿಂದ್‌ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಸಾರಿರುವ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿ ಹಾಗೂ ಈ ವಿಚಾರದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿಲುವುಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ  ಕೋವಿಂದ್‌ ಅವರಿಗೆ ಮಾಹಿತಿ ನೀಡಿದರು.

ಇನ್ನು ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಆಪರೇಷನ್‌ ಗಂಗಾ ಶುರು ಮಾಡಿದೆ. ಈಗಾಗಲೇ ಆರು ವಿಮಾನಗಳಲ್ಲಿ ವಿದ್ಯಾರ್ಥಿಗಳನ್ನು ಭಾರತಕ್ಕೆ ಸೇಫಾಗಿ ಕರೆತರಲಾಗಿದೆ. ಈ ಕಾರ್ಯಾಚರಣೆ ಹೇಗಿದೆ. ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಪರಿಸ್ಥಿತಿ ಹೇಗಿದೆ..?, ವಿದ್ಯಾರ್ಥಿಗಳನ್ನು ಸೇಫಾಗಿ ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳೇನು..? ಎಂಬುದರ ಕುರಿತು ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿವರಿಸಿದ್ದಾರೆ.

 

Share Post