Lifestyle

ಪ್ರಸಿದ್ಧ ಪುಣ್ಯ ಕ್ಷೇತ್ರ ಕೇದಾರನಾಥ ದೇಗುಲದಲ್ಲಿ 228 ಕೆಜಿ ಚಿನ್ನ ನಾಪತ್ತೆ!

ಕೇದಾರನಾಥ; ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮೀಜಿಯವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.. 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದರಾನಾಥ ದೇವಸ್ಥಾನದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂಬ ಆಘಾತಕಾರಿ ಸುದ್ದಿಯನ್ನು ಅವರ ಹಂಚಿಕೊಂಡಿದ್ದಾರೆ.. ದೇಗುಲದಲ್ಲಿ ಭಾರೀ ಚಿನ್ನದ ಹಗರಣ ನಡೆದಿದ್ದು, ಈ ಬಗ್ಗೆ ಯಾರೂ ಕೂಡಾ ಮಾತನಾಡುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ; ಡ್ರಗ್ಸ್‌ ಕೇಸ್‌ನಲ್ಲಿ ನಟಿ ರಕುಲ್‌ ಪ್ರೀತ್‌ಸಿಂಗ್‌ ಸಹೋದರ ಅರೆಸ್ಟ್‌!

ದೆಹಲಿಯಲ್ಲಿ ಕೇದಾರನಾಥ ದೇವಾಲಯ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.. ಇದಕ್ಕೆ ಕೆಲವರ ವಿರೋಧವಿದೆ.. ಹೀಗಾಗಿರುವಾಗಲೇ ಶಂಕರಾಚಾರ್ಯ ಸ್ವಾಮೀಜಿಯವರು ಈ ಆರೋಪ ಮಾಡಿದ್ದು, ಕೇದಾರನಾಥದಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ದೇಗುಲ ಕಟ್ಟಲು ಹೊರಟಿದ್ದಾರೆ.. ಹಾಗೇನಾದರೂ ಆದರೆ ಮತ್ತೊಂದು ಹಗನರಣ ನಡೆಸುವ ಸಾಧ್ಯತೆ ಇದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ..

Share Post