LifestyleNational

ಸೀರೆಯುಟ್ಟು, ಸಿಂಗಾರ ಮಾಡಿಕೊಂಡು ಸರ್ಕಾರಿ ನೌಕರ ಆತ್ಮಹತ್ಯೆ!

ಡೆಹ್ರಾಡೂನ್; ಸರ್ಕಾರಿ ನೌಕರನೊಬ್ಬ ಮಹಿಳೆಯಂತೆ ಸೀರೆ ಉಟ್ಟು ಸಿಂಗಾರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರಾಖಂಡದ ಮಸ್ಸೂರಿಯಲ್ಲಿ ಈ ಘಟನೆ ನಡೆದಿದೆ.

  ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್‌ ಸಂಸ್ಥೆ ಉದ್ಯೋಗಿ 22 ವರ್ಷದ ಅನುಕುಲ್ ರಾವತ್ ಆತ್ಮಹತ್ಯೆ ಮಾಡಿಕೊಂಡವರು.. ಇವರು ಸರ್ಕಾರಿ ಕ್ವಾಟರ್ಸ್ ನಲ್ಲಿ ವಾಸ ಮಾಡುತ್ತಿದ್ದರು.. ಅದೇನು ಕಾರಣವೋ ಗೊತ್ತಿಲ್ಲ.. ಹುಡುಗಿಯಂತೆ ಸೀರೆ ಉಟ್ಟಿರುವ ಅವರು, ಲಿಪ್ ಸ್ಟಿಕ್ ಹಚ್ಚಿಕೊಂಡು, ಮೇಕ್ಅಪ್ ಮಾಡಿಕೊಂಡಿದ್ದಾರೆ.. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

  ಕ್ವಾರ್ಟರ್‌ನಲ್ಲಿ ಅನುಕುಲ್ ರಾವತ್ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

   ಗುರುವಾರ ಅನುಕೂಲ್ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಅವರಿಗಾಗಿ ಹುಡುಕಾಟ ನಡೆಸಲಾಗಿತ್ತು..  ಕೊಠಡಿ ಒಳಗಿನಿಂದ ಬೀಗ ಹಾಕಿರುವುದನ್ನು ಸಿಬ್ಬಂದಿ ಪತ್ತೆ ಮಾಡಿದರು. ಪೊಲೀಸರು ಬಂದ ನಂತರ ಬಾಗಿಲು ಒಡೆದು ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ..

ಅನುಕೂಲ್  ನೆರೆಹೊರೆಯ ಇತರ ಉದ್ಯೋಗಿಗಳೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ ಎಂಬುದಾಗಿ ತಿಳಿದುಬಂದಿದೆ. ಆತ್ಮಹತ್ಯೆಗೆ ಲೈಂಗಿಕ ಅಸ್ವಸ್ಥತೆಯೇ ಕಾರಣ ಎಂದು ಹೇಳಲಾಗುತ್ತಿದೆ.

Share Post