CrimeNational

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಎನ್‌ಐಎ ದಾಳಿ

ನವದೆಹಲಿ; ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದರೋಡೆಕೋರು ಹಾಗೂ ಭಯೋತ್ಪಾದಕರ ಜಾಲದ ಬೆನ್ನುಬಿದ್ದಿದ್ದಾರೆ. ಇದಕ್ಕಾಗಿ ಇಂದು ಬೆಳಗ್ಗೆ ದೆಹಲಿ, ಹರಿಯಾಣ ಸೇರಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಎನ್‌ಐಎ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಲಾರೆನ್ಸ್ ಬಿಷ್ಣೋಯ್, ನವೀನ್ ದಬಾಸ್ ಮತ್ತು ಸುನಿಲ್ ಬಲಿಯಾನ್ ಅಲಿಯಾಸ್ ಟಿಲ್ಲು ತಾಜ್ಪುರಿಯಾ ಎಂಬ ಮೂವರು ದರೋಡೆಕೋರರನ್ನು ಬಂಧಿಸಲಾಗಿತ್ತು. ಭಯೋತ್ಪಾದಕ ಜಾಲ ಮತ್ತು ಅವುಗಳಿಗೆ ಧನಸಹಾಯ ಮತ್ತು ಮೂಲಸೌಕರ್ಯಗಳನ್ನು ಒದಗಿಸುತ್ತಿರುವವರನ್ನು ಪತ್ತೆ ಮಾಡಲು ದಾಳಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Share Post