National

ಸ್ವಾವಲಂಬಿ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು NEP ಜಾರಿ : ಯೋಗಿ ಆದಿತ್ಯನಾಥ್

ಕಾನ್ಪುರ : ʼಸ್ವಾವಲಂಬಿ ಭಾರತʼ ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ʼಹೊಸ ರಾಷ್ಟ್ರೀಯ ಶಿಕ್ಷಣ ನೀತಿʼಯನ್ನು ಜಾರಿಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಂಗಳವಾರ ಹೇಳಿದ್ದಾರೆ.

ಕಾನ್ಪುರ ಐಐಟಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ, “ʼಸ್ವಾವಲಂಬಿ ಭಾರತʼ ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕಾಗಿ ʼಹೊಸ ರಾಷ್ಟ್ರೀಯ ಶಿಕ್ಷಣ ನೀತಿʼಯನ್ನು ಜಾರಿಗೊಳಿಸಲಾಗಿದೆ. ದೂರದೃಷ್ಟಿ ಮತ್ತು ರಾಜ್ಯದ ಯುವಕರಿಗೆ ಹೊಸ ದಾರಿ ತೋರುವ ಕಾನ್ಪುರ ಐಐಟಿ, ಲಕ್ನೌ ಐಐಟಿಯನ್ನು ಹೊಂದಿರುವುದು ನಮ್ಮ ಸುಯೋಗ” ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಉಪಸ್ಥಿತರಿದ್ದರು. ೨೧ನೇ ಶತಮಾನದಲ್ಲಿ ಭಾರತ ಹೇಗಿರಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಹೊಂದಿರುವ ದೃಷ್ಟಿಕೋನದ ಬಗ್ಗೆ ಯೋಗಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Share Post