National

ಶ್ರೀನಗರದಲ್ಲಿ ಬೀದಿನಾಯಿಗಳ ಹಾವಳಿ; 39 ಮಂದಿಗೆ ಗಾಯ

ಶ್ರೀನಗರ:  ಜಮ್ಮು ಕಾಶ್ಮೀರದ ಶ್ರೀನಗರ ನಗರದಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ. ಹಿಂಡು ಹಿಂಡು ಬೀದಿನಾಯಿಗಳು ಸಿಕ್ಕಸಿಕ್ಕವರ ಮೇಲೆ ದಾಳಿ ಮಾಡುತ್ತಿವೆ. ಬೀದಿ ನಾಯಿಗಳ ದಾಳಿಯಲ್ಲಿ 17 ಪ್ರವಾಸಿಗರು ಸೇರಿದಂತೆ 39 ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ ಶ್ರೀನಗರದ ದಾಲ್ಗೇಟ್ ಪ್ರದೇಶದಲ್ಲಿ ಬೀದಿ ನಾಯಿಗಳ ಹಿಂಡು ದಾಳಿ ಮಾಡಿದ್ದು, ದಾಳಿಯಲ್ಲಿ 39 ಜನರು ಗಾಯಗೊಂಡಿದ್ದಾರೆ.

      ಗಾಯಾಳುಗಳಲ್ಲಿ 17 ಪ್ರವಾಸಿಗರು, 22 ಸ್ಥಳೀಯರು ಸೇರಿದ್ದಾರೆ. ಎಲ್ಲ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ.  ಶ್ರೀನಗರದ ಎಸ್‌ಎಂಎಚ್‌ಎಸ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಕವಾಲ್‌ಜೀತ್ ಸಿಂಗ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, 39 ಮಂದಿ ನಾಯಿ ಕಡಿತಕ್ಕೆ ಒಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ದಾಲ್ ಸರೋವರದ ದಂಡೆಯಲ್ಲಿರುವ ಡಾಲ್ಗೇಟ್ ಪ್ರದೇಶ ಶ್ರೀನಗರ ನಗರದ ಪ್ರವಾಸಿ ಚಟುವಟಿಕೆಯ ಕೇಂದ್ರ ಬಿಂದು. ಶ್ರೀನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ವಿರುದ್ಧ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Share Post