National

ಕರೀಂನಗರದಲ್ಲಿ ಭೀಕರ ಅಪಘಾತ; ನಾಲ್ವರು ದುರ್ಮರಣ

ಕರೀಂನಗರ್:‌ ತೆಲಂಗಾಣದ ಕರಿಂನಗರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಾನುವಾರ ಬೆಳಗ್ಗೆ ಕರೀಂನಗರದ ಕಮಾನ್ ಎಕ್ಸ್ ರಸ್ತೆಯ ಬಳಿ ಪಾದಚಾರಿ ಮಾರ್ಗದಲ್ಲಿ ಎಸ್‌ಯುವಿ ಚಾಲಕ ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದಿದ್ದಾನೆ. ಇದರ ಪರಿಣಾಮ 4 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ಸುನೀತಾ, ಲಲಿತಾ, ಜ್ಯೋತಿ ಮತ್ತು ಫರಿಯಾದ್ ಎಂದು ಗುರುತಿಸಲಾಗಿದೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಸ್ತೆ ಅಪಘಾತದ ನಂತರ, ಎಸ್‌ಯುವಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ, ತನಿಖೆ ನಡೆಯುತ್ತಿದೆ.

Share Post