National

77ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ; ಕೆಂಪುಕೋಟೆ ಸುತ್ತಮುತ್ತ ಬಿಗಿ ಭದ್ರತೆ

ನವದೆಹಲಿ; ನಾಳೆ ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಇತ್ತ ರಾಷ್ಟ್ರ ರಾಜಧಾನಿ ಕೆಂಪುಕೋಟೆಯಲ್ಲಿ ವಿಜೃಂಬಣೆಯ ಸ್ವಾತಂತ್ರ್ಯೋತ್ಸ ನಡೆಯಲಿದೆ. ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ ಸುತ್ತಮುತ್ತ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

ಕೆಂಪುಕೋಟೆ ಸುತ್ತಮುತ್ತ ಸುಮಾರು 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಕೆಂಪುಕೋಟೆಯ ಪ್ರಮುಖ ಭಾಗಗಳಲ್ಲಿ 1 ಸಾವಿರ ಫೇಸ್‌ ಡಿಟೆಕ್ಟರ್‌ ಕ್ಯಾಮಾರಗಳನ್ನು ಅಳವಡಿಕೆ ಮಾಡಲಾಗಿದೆ. ಹರಿಯಾಣದ ನುಹ್ ಪ್ರದೇಶಗಳಲ್ಲಿ ಇತ್ತೀಚೆಗೆ ಹಲವು ಹಿಂಸಾಚಾರಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಈ ಬಾರಿ ಕೆಂಪುಕೋಟೆ ಸುತ್ತಮುತ್ತ ಬಿಗಿ ಬಂದೋಬಸ್ತ್‌ ಮಾಡಲಾಗಿದೆ.

ಕೆಂಪು ಕೋಟೆ ಸುತ್ತಮುತ್ತ ಡ್ರೋನ್‌ಗಳ ಹಾರಾಟ ನಡೆಸುವಂತಿಲ್ಲ. ವಾಯು ರಕ್ಷಣಾ ಗನ್‌ಗಳನ್ನು ಅಳವಡಿಸುವುದು ಸೇರಿ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಧಾನಿ ಸೇರಿ ಗಣ್ಯರ ಭದ್ರತೆಗೆ ಶಾರ್ಪ್‌ ಶೂಟರ್‌ಗಳನ್ನು ನೇಮಕ ಮಾಡಲಾಗಿದೆ.

 

Share Post