National

ಪ್ರಪಾತಕ್ಕೆ ಉರುಳಿದ ಮದುವೆ ದಿಬ್ಬಣದ ಬಸ್‌; 14 ಮಂದಿ ದುರ್ಮರಣ

ಉತ್ತರಾಖಂಡ್‌; ಮದುವೆ ದಿಬ್ಬಣದ ಬಸ್‌ ಪ್ರಪಾತಕ್ಕೆ ಉರುಳಿ ಭಾರಿ ದುರಂತ ಸಂಭವಿಸಿದೆ. ಇಲ್ಲಿನ ಚಂಪಾವತ್‌ ಜಿಲ್ಲೆಯ ಬುದಮ್‌ ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಸುಮಾರು 14 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಮದುವೆ ಸಮಾರಂಭ ಮುಗಿಸಿ ವಾಪಸ್‌ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಉತ್ತರಾಖಂಡ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಅವರು ಪಿಎಂಎನ್‌ಆರ್‌ಎಫ್‌ನಿಂದ ತಲಾ ₹ 2 ಲಕ್ಷ ಪರಿಹಾರ ಮತ್ತು ಗಾಯಗೊಂಡಿರುವವರಿಗೆ ತಲಾ ₹ 50,000 ನೆರವು ಘೋಷಿಸಿದ್ದಾರೆ.

Share Post